ನವದೆಹಲಿ : ಲೋಕಸಭೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಅಂದರೆ ಬಿಜೆಪಿ-ಎನ್ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಸೇವೆ ನೀಡಿರುವ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾವು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸರ್ಕಾರದ ಆಡಳಿತದಿಂದಾಗಿ ಭಾರತದ ಜನರು ಭ್ರಮನಿರಸನಗೊಂಡಿದ್ದರು. ಹಗರಣಗಳು ಮತ್ತು ಕೆಟ್ಟ ನೀತಿಗಳಿಂದ ಯಾವುದೇ ಕ್ಷೇತ್ರವನ್ನು ಬಿಟ್ಟಿರಲಿಲ್ಲ. ಹೀಗಾಗಿ ಭಾರತವನ್ನು ಜಗತ್ತು ಕೈ ಬಿಟ್ಟಿತ್ತು. ಆದರೆ, ಈಗ ಅದ್ಭುತ ದಿಕ್ಕು ಪಡೆದಿದೆ ಎಂದು ಹೇಳಿದ್ದಾರೆ.
ನಮ್ಮ ಮೂರನೇ ಅವಧಿಯಲ್ಲಿ, ಬಹಳಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಎಪ್ಪತ್ತು ವರ್ಷಗಳ ಕಾಲ ಆಳಿದವರು ಮಾಡಿದ ಲೋಪಗಳನ್ನು ಸರಿಪಡಿಸಲೇ ಬೇಕಾಯಿತು. ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗುವುದು. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ ಎಂದು ಹೇಳಿದ್ದಾರೆ.



















