ಮೊಬೈಲ್ ನೋಡಬೇಡ ಎಂದು ತಂದೆ ಬುದ್ಧಿವಾದ ಹೇಳಿದ್ದಕ್ಕೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನೆಡೆದಿದೆ.
ಹಳಿಯಾಳದ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಓಂ ಕದಂ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕನಾಗಿದ್ದಾನೆ. ಮನೆಯಲ್ಲಿರುವಾಗ ವಿಪರೀತವಾಗಿ ಮೊಬೈಲ್ ಬಳಸುತ್ತಿದ್ದ ಕಾರಣ ತಂದೆ ಮನೋಹರ್ ಮೊಬೈಲ್ ನೋಡದಂತೆ ಎಚ್ಚರಿಸಿದ್ದರು.
ಹಠಕ್ಕೆ ಬಿದ್ದ ಕದಂ ಮೊಬೈಲ್ ಬಳಕೆ ಕಡಿಮೆ ಮಾಡಿರಲಿಲ್ಲ. ಹೀಗಾಗಿ ತಂದೆ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದರು. ಮೊಬೈಲ್ ಗೀಳಿಗೆ ಬಿದ್ದಿದ್ದ ಕದಂ, ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















