ಕೊಪ್ಪಳ: ಕಳೆದ 15 ದಿನಗಳಲ್ಲಿ ಬರೋಬ್ಬರಿ 17 ಮೇವಿನ ಬಣವಿಗಳಿಗೆ ಬೆಂಕಿ ತಗುಲಿದ್ದು, ರೈತರು ಸಂಕಷ್ಟ ಪಡುವಂತಾಗಿದೆ. ಇದರಿಂದಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಯಾರೋ ದುಷ್ಕರ್ಮಿಗಳು ಒಂದಲ್ಲ ಒಂದು ಬಣವಿಗೆ ಪ್ರತಿ ದಿನ ಬೆಂಕಿ ಹಚ್ಚುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅಂತಹ ದುಷ್ಕರ್ಮಿಗಳು ಕೂಡಲೇ ಪತ್ತೆ ಹಚ್ಚಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದುಷ್ಕರ್ಮಿಗಳು ಮೇವಿನ ಬಣವಿಗಳಿಗೆ ಬೆಂಕಿ ಹಚ್ಚುತ್ತಿರುವುದರಿಂದಾಗಿ ದನ-ಕರುಗಳಿಗೆ ಮೇವು ಇಲ್ಲದಂತಾಗುತ್ತಿದೆ. ಹೀಗಾಗಿ ಅಂತಹ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಮನವಿ ಮಾಡುತ್ತಿದಾದರೆ.
ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚುತ್ತಿರುವ ಶಂಕೆ ಈಗ ವ್ಯಕ್ತವಾಗಿದೆ. ಈ ಘಟನೆ ಕೊಪ್ಪಳ ತಾಲೂಕಿನ ಕವಲೂರಿನಲ್ಲಿ ನಡೆದಿವೆ. ವರ್ಷಪೂರ್ತಿ ಸಾಕಾಗುವಷ್ಟು ಮೇವನ್ನು ರೈತರು ಸಂಗ್ರಹಿಸಿ ಇಟ್ಟಿದ್ದರು. ಆದರೆ, ಈಗ ಆ ಮೇವು ಬೆಂಕಿಗೆ ಆಹುತಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.