ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case)ಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪ್ರದೋಷ್ ನ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರ ಬೆಳಕಿಗೆ ಬಂದಿದೆ.
ನಟ ದರ್ಶನ್ (Challenging Star Darshan) ಹತ್ತಿರ ಲೈಸೆನ್ಸ್ ಪಡೆದಿರುವ 2 ಯುಎಸ್ ಮೇಡ್ ಪಿಸ್ತೂಲ್ಗಳಿದ್ದರೆ, ಪ್ರದೋಷ್ (Pradosh) ಹತ್ತಿರ ಒಂದು ಲೈಸೆನ್ಸ್ ಪಿಸ್ತೂಲ್ ಇದೆ ಎನ್ನಲಾಗಿದೆ.

ದರ್ಶನ್ ಮತ್ತು ಪ್ರದೋಷ್ಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯನ್ನು ಪೊಲೀಸರೇ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕು. ಗಣ್ಯ ವ್ಯಕ್ತಿಗಳು ಅನಿವಾರ್ಯದ ಕುರಿತು ದಾಖಲೆ ನೀಡಿ ಶಸ್ತ್ರಾಸ್ತ್ರ ವಾಪಸ್ ನೀಡುವಿಕೆಯಿಂದ ವಿನಾಯಿತಿ ಪಡೆಯಬಹುದಾಗಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಗಳು, ಬ್ಯುಸಿನೆಸ್ ಮನ್ಗಳು, ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಹಿರಿಯ ರಾಜಕಾರಣಿಗಳಿಗೆ ಮಾತ್ರ ವಿನಾಯಿತಿ ನೀಡಬಹುದು. ಇನ್ನುಳಿದಂತೆ ಎಲ್ಲರ ಹತ್ತಿರ ಇರುವ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ವಶಕ್ಕೆ ಪಡೆಯಬಹುದು.

ನಗರದ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಗಣ್ಯರ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ಗೆ ಕೂಡ ವಿನಾಯಿತಿ ನೀಡಿ, ಗನ್ ನೀಡಲಾಗಿತ್ತು ಎನ್ನಲಾಗದೆ. ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ತನಿಖಾಧಿಕಾರಿಗಳು ಆರ್ ಆರ್ ನಗರ ಮತ್ತು ಗಿರಿನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.