ಕೇದಾರನಾಥ: ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.
ಈ ಕುರಿತು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಕುರಿತು ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇದಾರನಾಥದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಕುರಿತು ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಲೈ 10ರಂದು ದೆಹಲಿಯಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾಗವಹಿಸಿದ್ದರು. ಇಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ಸ್ವಾಮಿ ಅವಿಮುಕ್ತೇಶ್ವರಾನಂದ, ನೀವು ಮೋಸ ಹೋಗಿದ್ದು, ಮತ್ತೆ ಮಹಾರಾಷ್ಟ್ರ ಸಿಎಂ ಆಗುತ್ತೀರಿ ಎಂದು ಹೇಳಿದ್ದಾರೆ.
ನಾವೆಲ್ಲ ಸನಾತನ ಧರ್ಮದ ಅನುಯಾಯಿಗಳು. ನಮಗೆ ಪಾಪ ಮತ್ತು ಪುಣ್ಯ ಎಂಬ ವ್ಯಾಖ್ಯಾನವಿದೆ. ದ್ರೋಹವೇ ದೊಡ್ಡ ಪಾಪ. ಉದ್ಧವ್ ಠಾಕ್ರೆ ಮೋಸ ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.