ಪಾಟ್ನಾ: ಬಿಹಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವರನ್ನು ಬಲಿ ಪಡೆದಿರುವ ಘಟನೆ ನಡೆದಿದೆ.
ಬಿಹಾರದ ಹಲವು ಜಿಲ್ಲೆಗಳಲ್ಲಿ ಗುಡುಗು- ಸಿಡಿಲು ಮತ್ತು ಆಲಿಕಲ್ಲು ಮಳೆಯಾಗುತ್ತಿದ್ದು, ಕನಿಷ್ಠ 25 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಹಲವಾರು ಜನರು ಗಾಯಗೊಂಡಿದ್ದಾರೆ. ಬಿಹಾರದ (Bihar) ನಳಂದದಲ್ಲಿ 18 ಸಾವುಗಳು ಸಂಭವಿಸಿವೆ ಎಂದು ಸಿಎಂ ಕಚೇರಿ ತಿಳಿಸಿದೆ.
ಸಿವಾನ್ ನಲ್ಲಿ ಇಬ್ಬರು, ಕಟಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಸಾವಿಗೆ ಸಿಎಂ ನಿತೀಶ್ ಕುಮಾರ್ (CM Nitish Kumar)ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಾವನ್ನಪ್ಪಿದವರ ಸಂಬಂಧಿಕರಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.