450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಕ್ರಿಕೆಟ್ ತಂಡದ ಆಟಗಾರರಿಗೆ ಸಮನ್ಸ್ ಜಾರಿಯಾಗಿದೆ.
ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ರಿಗೂ ಗುಜರಾತ್ ಅಪರಾಧ ತನಿಖಾ ಇಲಾಖೆ ಅಂದರೆ ಸಿಐಡಿಯಿಂದ ಸಮನ್ಸ್ ಜಾರಿಯಾಗಿದೆ.
ಭೂಪೇಂದ್ರಸಿನ್ಹ್ ಝಾಲಾ ನೇತೃತ್ವದ BZ ಫೈನಾನ್ಶಿಯಲ್ ಸರ್ವಿಸಸ್ ಹೆಸರಿನ ಕಂಪನಿ, ಬ್ಯಾಂಕ್ ಗಳಿಗಿಂತಲೂ ಹೆಚ್ಚಿನ ಬಡ್ಡಿದರ ನೀಡುವುದಾಗಿ ಹೂಡಿಕೆದಾರರಿಗೆ ಭರವಸೆ ನೀಡಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿಸಿದೆ. ಆದರೆ, ಹೇಳಿದಂತೆ ಬಡ್ಡಿದರ ನೀಡುವಲ್ಲಿ ಕಂಪನಿ ವಿಫಲವಾಗಿದೆ. ಹೀಗಾಗಿ ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದಾರೆ.
ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯುವ ಆಟಗಾರರಾದ ಶುಭ್ಮನ್ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಪೊಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಸಿಐಡಿ ನೋಟಿಸ್ ಜಾರಿ ಮಾಡಿದೆ.
ವರದಿಯಂತೆ, ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರೆ, ಇನ್ನಿತರ ಆಟಗಾರರು ಸಣ್ಣ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ. ಗಿಲ್ ಪ್ರಸ್ತುತ ಆಸ್ಟ್ರೇಲಿಯಾದಲ್ಲಿರುವುದರಿಂದ, ಅವರು ದೇಶಕ್ಕೆ ಹಿಂದಿರುಗಿದ ನಂತರ ಸಿಐಡಿ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.