ಇಂಫಾಲ: ಮಣಿಪುರದ (Manipur)ಲ್ಲಿ 6 ಜನರ ಹತ್ಯೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಹಾದಿ ಹಿಡಿದಿದೆ.
ಜಿರಿಬಾಮ್ ಜಿಲ್ಲೆಯಲ್ಲಿ ಒತ್ತೆಯಾಳಾಗಿದ್ದ ಆರು ಜನರ ಹತ್ಯೆಯನ್ನು ಖಂಡಿಸಿ ಇಂಫಾಲನಲ್ಲಿ (Imphal) ಇಬ್ಬರು ಮಣಿಪುರದ ಸಚಿವರು ಮತ್ತು ಮೂವರು ಶಾಸಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಪಂ ರಂಜನ್ ಅವರ ಲ್ಯಾಂಫೆಲ್ ಸನಕೀತೆಲ್ ಪ್ರದೇಶದಲ್ಲಿರುವ ನಿವಾಸಕ್ಕೆ ಪ್ರತಿಭಟನಾಕಾರರ ಗುಂಪು ನುಗ್ಗಿದೆ. ಬಿಜೆಪಿ ಶಾಸಕ ಆರ್ಕೆ ಇಮೊ ಅವರ ನಿವಾಸದ ಮುಂದೆ ಸೇರಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಕೇಶಾಮ್ ಥಾಂಗ್ ಕ್ಷೇತ್ರದ ಸ್ವತಂತ್ರ ಶಾಸಕ ಸಪಂ ನಿಶಿಕಾಂತ ಸಿಂಗ್ ಅವರನ್ನು ನಿವಾಸದಲ್ಲಿ ಭೇಟಿ ಮಾಡಲು ಬಂದಿದ್ದ ಪ್ರತಿಭಟನಾಕಾರರು, ಶಾಸಕರು ರಾಜ್ಯದಲ್ಲಿ ಇಲ್ಲ ಎಂದು ತಿಳಿಸಿದ ನಂತರ ಅವರ ಪತ್ರಿಕೆಯ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಶಂಕಿತ ಕುಕಿ ಬಂಡುಕೋರು 8 ತಿಂಗಳ ಮಗು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.