ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ವರದಿ ಸಲ್ಲಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿದ್ದರು. ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಇಡಿ ಇತ್ತೀಚೆಗೆ ಚಾರ್ಜ್ಶೀಟ್ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರ ಎಂದು ಉಲ್ಲೇಖಿಸಲಾಗಿತ್ತು.
ಸತ್ಯನಾರಾಯಣ ವರ್ಮಾ ಜತೆ ಸಚಿವರ ನಿಕಟ ಸಂಪರ್ಕ, ಹಣದ ಬಗ್ಗೆ ಉಲ್ಲೇಖಿಸಲಾಗಿತ್ತು. ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದನ್ನು ಕೂಡ ತಿಳಿಸಲಾಗಿತ್ತು. ಹೀಗಾಗಿ ಬಿ.ನಾಗೇಂದ್ರ ಸೇರಿದಂತೆ ಐವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಆದರೆ ಇಡಿ ಮತ್ತು ಎಸ್ ಐಟಿ ತಂಡಗಳ ಆರೋಪ ಪಟ್ಟಿಯಲ್ಲಿ ತುಂಬಾ ವ್ಯತ್ಯಾಸ ಕಂಡು ಬಂದಿದೆ.