ರತನ್ ಟಾಟಾ ಇಹಲೋಕ ತ್ಯಜಿಸಿದ್ದಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಕಣ್ಣೀರು ಸುರಿಸಿದ್ದಾರೆ.
ಕೈಗಾರಿಕೋದ್ಯಮಿಯಾಗಿ ಮಾತ್ರವಲ್ಲದೇ ಸಮಾಜಮುಖಿ ಕಾರ್ಯಗಳಿಂದಲೂ ಜನಸೇವೆ ಮಾಡಿದ್ದ ರತನ್ ಟಾಟಾ ಅವರ ಅಗಲಿಕೆಯಿಂದ ದೇಶಕ್ಕೆ ತುಂಬಾ ನಷ್ಟವಾಗಿದೆ. ನಟ ರಜನಿಕಾಂತ್ ಕೂಡ ನುಡಿ ನಮನ ಸಲ್ಲಿಸಿ, ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ತಮ್ಮ ದೂರದೃಷ್ಟಿ ಮತ್ತು ಪ್ಯಾಷನ್ ಮೂಲಕ ಭಾರತವನ್ನು ಜಾಗತಿಕ ಭೂಪಟದಲ್ಲಿ ಕಾಣುವಂತೆ ಮಾಡಿದ ದಿಗ್ಗಜ ಐಕಾನ್. ಸಾವಿರಾರು ಕೈಗಾರಿಕೋದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ವ್ಯಕ್ತಿ. ಅನೇಕ ತಲೆಮಾರಿನ ಜನರಿಗೆ ಉದ್ಯೋಗ ನೀಡಿದ ವ್ಯಕ್ತಿ. ಎಲ್ಲರಿಂದಲೂ ಪ್ರೀತಿ ಮತ್ತು ಗೌರವ ಪಡೆದ ವ್ಯಕ್ತಿ’ ಎಂದು ರಜನಿಕಾಂತ್ ಹಾಡಿ ಹೊಗಳಿ ಕಂಬನಿ ಮಿಡಿದಿದ್ದಾರೆ.
ಈ ಮಹಾನ್ ವ್ಯಕ್ತಿಯ ಜೊತೆ ಕಳೆದ ಪ್ರತಿ ಕ್ಷಣವನ್ನು ನಾನು ನೆನಪಿಡುತ್ತೇನೆ. ಭಾರತ ಮಾತೆಯ ನಿಜವಾದ ಸುಪುತ್ರ ಇನ್ನಿಲ್ಲ ಎಂದು ಬರೆದುಕೊಂಡಿದ್ದಾರೆ.