ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ವಿಪರೀತವಾಗಿ ಬೆನ್ನು ನೋವು ಕಾಡುತ್ತಿದ್ದು, ಅವರಿಗೆ ಮೆಡಿಕಲ್ ಬೆಡ್ ತರಿಸಲಾಗಿದೆ.
ಆರೋಪಿ ದರ್ಶನ್ ಈಗಾಗಲೇ ಬಳ್ಳಾರಿ ಜೈಲಿನಲ್ಲಿದ್ದು, ಬೆನ್ನು ನೋವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಬೆಡ್ ಹಾಗೂ ದಿಂಬು ನೀಡಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ಬೆಡ್ ಮತ್ತು ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಜಿಲ್ಲಾ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ಈ ವಸ್ತುಗಳನ್ನು ದರ್ಶನ್ ಗಾಗಿ ತರಿಸಲಾಗಿದೆ.
ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು ಮೆಡಿಕಲ್ ಬೆಡ್ ಮತ್ತು ದಿಂಬು ನೀಡುವಂತೆ ಸಲಹೆ ನೀಡಿದ್ದರು. ಮೆಡಿಕಲ್ ವರದಿ ಬಂದ ನಂತರ ಜೈಲಾಧಿಕಾರಿಗಳು ವೈದ್ಯಾಧಿಕಾರಿಗಳಿಗೆ ಹೇಳಿದ್ದರು. ಹೀಗಾಗಿ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಿಂದ ಮೆಡಿಕಲ್ ಬೆಡ್ ಹಾಗೂ ದಿಂಬು ತಂದು ನೀಡಲಾಗಿದೆ.