ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಲೇವಡಿ ಮಾಡುವ ಭರದಲ್ಲಿ ಮಾಜಿ ಸಂಸದ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯನ್ನು ರಾಮನಗರದ ಜನರು ಓಡಿಸಿದ್ದಾರೆ. ಹೀಗಾಗಿ ಮಂಡ್ಯದವರೆಲ್ಲ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಮಂಡ್ಯ ಜಿಲ್ಲೆಯ ಮುಖಂಡರು ಮತ್ತು ಜನತೆ ಈಗಲಾದರೂ ಎಚ್ಚೆತ್ತುಕೊಳ್ಳಿ. ಮಂಡ್ಯ ಜಿಲ್ಲೆಯ ಜನತೆಗೆ ಕರೆ ಕೊಡುತ್ತೇನೆ “ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ” ಎಂದಿದ್ದಾರೆ.
ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್. ಸಂಸದ ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಯೋಗೇಶ್ವರ್ ತುಂಬಾ ಶ್ರಮಿಸಿದರು. ಆದರೆ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನೇ ಬಲಿ ನೀಡಲಾಯಿತು. ಚನ್ನಪಟ್ಟಣ ಜನ ದಡ್ಡರಲ್ಲ, ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.
ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಅವರಿಂದ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದರು. ಬಿಜೆಪಿಯಲ್ಲಿನ ಗುಂಪುಗಾರಿಕೆಯಿಂದ ಯೋಗೇಶ್ವರ್ ಪಕ್ಷ ಬಿಟ್ಟರು. ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿ ಲಾಟರಿಯಲ್ಲಿ ಸಿಎಂ ಆದವರು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರ ಕೈ ಹಿಡಿದರು ಎಂದು ವ್ಯಂಗ್ಯವಾಡಿದ್ದಾರೆ.