ಬೆಳಗಾವಿ: ಮದ್ಯ (Alcohol) ಸೇವಿಸಲು ಹಣ ನೀಡಲಿಲ್ಲ ಎಂದು ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬೆಳಗಿವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ. ಮದ್ಯ ವ್ಯಸನಿಯಾಗಿದ್ದ ಮಗನಿಂದ ತಂದೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದರು. ಇದನ್ನು ಕಂಡು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಹತ್ಯೆಯಾದ ದುರ್ದೈವಿ ತಂದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಳಾಸಾಬು ಮಲ್ಲು ವನಖಂಡೆಯನ್ನು (49) ತಂದೆಯನ್ನೇ ಕೊಲೆ ಮಾಡಿದ ಕುಡುಕ ಮಗ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.