ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಪತ್ನಿ ಕಂಬನಿ ಮಿಡಿಯುತ್ತಿದ್ದಾರೆ.
ಗುರುಪ್ರಸಾದ್ ಅವರು ಮೊದಲ ಪತ್ನಿ ಆರತಿಗೆ ವಿಚ್ಛೇದನ ನೀಡಿ, 2ನೇ ಮದುವೆ ಆಗಿದ್ದರು. ಎರಡನೇ ಪತ್ನಿ ಸುಮಿತ್ರಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಹಲವು ವಿಷಯಗಳನ್ನು ತಿಳಿಸಿದ್ದಾರೆ. ಗಂಡನ ಸಾವಿನಲ್ಲಿ ತಮಗೆ ಯಾವುದೇ ಅನುಮಾನ ಇಲ್ಲ ಎಂದು ಸುಮಿತ್ರಾ ಹೇಳಿದ್ದಾರೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಮಿತ್ರಾ ದೂರಿನಲ್ಲಿ ಹೇಳಿದ್ದಾರೆ.
ನಾನು 4 ವರ್ಷಗಳ ಹಿಂದೆ ಗುರುಪ್ರಸಾದ್ ಅವರನ್ನು ವಿವಾಹವಾಗಿದ್ದೆ. ನಮಗೆ ನಗು ಶರ್ಮಾ ಎಂಬ 4 ವರ್ಷದ ಹೆಣ್ಣು ಮಗು ಇದೆ. ಈ ಹಿಂದೆ ಗುರುಪ್ರಸಾದ್ ಅವರಿಗೆ ಆರತಿ ಎಂಬುವರರ ಜೊತೆ ಮದುವೆಯಾಗಿದ್ದು, ಅದು ವಿಚ್ಚೇಧನವಾಗಿರುತ್ತದೆ. ಬಸವೇಶ್ವರ ನಗರದ ಬಾಲಾಜಿ ರೆಸಿಡೆನ್ಸಿಯಲ್ಲಿ ಜೀವನ ಸಾಗಿಸುತ್ತಿದೆವು. ನಂತರ ನಾನು, ನನ್ನ ಯಜಮಾನರು ಈ 6 ತಿಂಗಳಿಂದ ಮನೆ ಖಾಲಿ ಮಾಡಿಕೊಂಡು ದಾಸನಪುರ ರಸ್ತೆಯಲ್ಲಿನ ಟಾಟಾ ನ್ಯೂ ಹೆವನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದೇವು.
ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನಮ್ಮ ಯಜಮಾನರು ನನ್ನನ್ನು ತಾಯಿಯ ಮನೆಯಲ್ಲಿ ಇರಲು ಹೇಳಿ ಕಳುಹಿಸಿಕೊಟ್ಟರು. ಲೋಕಸಭೆ ಚುನಾವಣೆ ಸಮಯದಲ್ಲಿ ಕೊನೆಯ ಬಾರಿ ಸಿಕ್ಕಿದ್ದೆವು. ನಮ್ಮ ಯಜಮಾನರು ಚಲನಚಿತ್ರ ಕೆಲಸದಲ್ಲಿ ಬ್ಯೂಸಿ ಆಗಿದ್ದರಿಂದ ನಾನು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದೆವು.ಅ. 25ರಿಂದಲೂ ನಾನು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ. ಆದರೆ, ರಿಸೀವ್ ಮಾಡಿಲ್ಲ. ಬ್ಯೂಸಿ ಇರಬಹುದು ಎಂದು ಸುಮ್ಮನಾದೆ. ನ. 3ರಂದು ಅಪಾರ್ಟ್ಮೆಂಟ್ ನಿವಾಸಿ ಜಯರಾಮ್ ಎಂಬುವರು ದೂರವಾಣಿ ಮೂಲಕ ನೀವು ವಾಸವಿದ್ದ ಮನೆಯಿಂದ ಏನೋ ಒಂದು ಥರ ದುರ್ವಾಸನೆ ಬರುತ್ತಿದೆ. ಮನೆಯ ಬಾಗಿಲು ಬಳಿ ಹೋಗಿ ಬಾಗಿಲು ತಟ್ಟಿದರೆ ಯಾರೂ ರೆಸ್ಪಾಂಡ್ ಮಾಡುತ್ತಿಲ್ಲ ಎಂದು ಹೇಳಿದರು. ನಾನು ಗಾಬರಿಯಿಂದ ಕುಟುಂಬದವರ ಜತೆ ಸೇರಿ ನೋಡಲಾಗಿ ಮನೆಯ ಬಾಗಿಲು ಹಾಕಿದ್ದು, ಕೂಗಿದರೂ ಏನೂ ಮಾತನಾಡಲಿಲ್ಲ.
ದುರ್ವಾಸನೆ ಬರುತ್ತಿತ್ತು ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಯಜಮಾನರು ಸಿನಿಮಾ ವಿಚಾರದಲ್ಲಿ ಸಾಲ ಮಾಡಿಕೊಂಡಿದ್ದು, ಈ ವಿಚಾರ ತಿಳಿದಿದ್ದು, ನಾನು ನಮ್ಮ ಯಜಮಾನರಿಗೆ ತೀರಿಸೋಣವೆಂದು ಧೈರ್ಯ ಹೇಳಿದ್ದೆ. ಆದರೂ ನನ್ನ ಮಾತನ್ನು ಲೆಕ್ಕಿಸದೇ ನನ್ನ ಗಂಡ ಸಾಲದ ಭಾದೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನನ್ನ ಪತಿಯ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ ಎಂದಿದ್ದಾರೆ.