ಬೆಂಗಳೂರು: ಬಿಪಿಎಲ್ (BPL Card) ಹಾಗೂ ಎಪಿಎಲ್ (APL Card ) ಸೇರಿದಂತೆ ಯಾವ ಕಾರ್ಡ್ ಕೂಡ ರದ್ದಾಗಲ್ಲ. ಹೀಗಾಗಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಕೆ.ಹೆಚ್.ಮುನಿಯಪ್ಪ (K.H Muniyappa) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 20-25ರಿಂದ ಅರ್ಹರಲ್ಲದವರು ಬಿಪಿಎಲ್ ನಲ್ಲಿದ್ದಾರೆ. ಬಡವರಲ್ಲದವರು ಹಾಗೂ ಅರ್ಹರಲ್ಲದವರೂ ಕೂಡ ಇದರಲ್ಲಿ ಸೇರಿಕೊಂಡಿದ್ದಾರೆ. ಶೇ. 80ರಷ್ಟು ರಾಜ್ಯದಲ್ಲಿ ಬಡವರ ಪ್ರಮಾಣ ಇದೆ. ಇದು ಸಾಧ್ಯವಾ? ಕರ್ನಾಟಕ ರಾಜ್ಯದಲ್ಲಿ ಶೇ. 80ರಷ್ಟು ಬಡವರಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಯಾವುದೇ ಕಾರಣಕ್ಕೂ ಬಿಪಿಎಲ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೆಸಿ ದೊಡ್ಡ ಗದ್ದಲ ಮಾಡ್ತಿದ್ದಾರೆ. ಯಾರು ಬಡತನ ರೇಖೆಗಿಂತ ಕೆಳಗಿದ್ದಾರೆ, ಯಾರು ಮೇಲಿದ್ದಾರೆ ಸತ್ಯವಾದ ಮಾಹಿತಿ ಹೊರಗೆ ಬಿಡುತ್ತೇನೆ. ಬಿಜೆಪಿಯವರು (BJP) ಸುಮ್ಮನೆ ತರಲೆ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.