ಬೆಂಗಳೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂಬ ಹೇಳಿಕೆ ನೀಡಿದ್ದ ಒಕ್ಕಲಿಗರ ಸಂಸ್ಥಾನನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು, ಮಠ- ಮಂದಿರಗಳಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಅಷ್ಟು ಪ್ರೀತಿ ಇದ್ದರೆ ನಿಮ್ಮ ಮನೆ, ಸೈಟ್ ಬರೆದುಕೊಡಿ ಎಂದು ಹೇಳಿದ್ದರು.
ಈ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು, “ಇದು ಮೂಲಭೂತ ಹಕ್ಕು, ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ದೇಶದ ಎಲ್ಲ ನಾಗರಿಕರಿಗೆ ಮತದಾನ ಹಕ್ಕು ಇದೆ. ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡುವುದು ತಪ್ಪು ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಸಚಿವರು, ಮತೀಯ ಶಕ್ತಿಗಳ ವಿರುದ್ಧ ಅಷ್ಟೊಂದು ಹೋರಾಟ ನಡೆಸಿದ ಬಾಬಾ ಸಾಹೇಬರು. ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು. ಇನ್ನು ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವ ಇಂತವರು. ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಗುಡುಗಿದ್ದಾರೆ.