ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಸಿಕ್ಕಿದೆ. ಹೀಗಾಗಿ ನಟ ದರ್ಶನ್ ಸೇರಿದಂತೆ ಅವರ ಕುಟುಂಬ ಹಾಗೂ ಅಭಿಮನಿಗಳು ಸಂತಸಗೊಂಡಿದ್ದಾರೆ. ಈ ಮಧ್ಯೆ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಅವರು ಮನವಿ ಮಾಡಿದ್ದಾರೆ.
ದರ್ಶನ್ ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಯಾರೂ ಮಾಡಬಾರದು. ಇದರಿಂದಾಗಿ ಅವರ ಘನತೆಗೆ ಧಕ್ಕೆಯಾಗುತ್ತದೆ. ಮತ್ತೆ ಒಳ್ಳೆಯ ಸಮಯ ಬರಲಿದೆ ಎಂದು ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಬರೆದುಕೊಂಡಿರುವ ಅವರು, ನನ್ನ ಪ್ರೀತಿಯ ಸಹೋದರರೇ,
ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.
ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ.
ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ! ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಒಗ್ಗಟ್ಟು ಸಾರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ.