ನವದೆಹಲಿ: ಬಾಂಗ್ಲಾದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಕ್ಕೆ ಮರಳಿ ಕಳುಹಿಸುವಂತೆ ಮನವಿ ಮಾಡಿದೆ.
ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, ಬಾಂಗ್ಲಾದೇಶವು ಮಾಜಿ ಪ್ರಧಾನಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಹಿಂತಿರುಗಿಸಲು ಬಯಸುತ್ತದೆ ಎಂದು ಮೌಖಿಕ ಟಿಪ್ಪಣಿ ಕಳುಹಿಸಿದೆ.
ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪರಾರಿಯಾಗಿ ಭಾರತದಲ್ಲಿ ಆಶ್ರಯ ಪಡೆದಿದ್ದರು. ಅಲ್ಲದೇ, ಢಾಕಾ ಮೂಲದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಶೇಖ್ ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು, ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ ಬಂಧನ ವಾರಂಟ್ ಹೊರಡಿಸಿದೆ. ಈ ಬೆನ್ನಲ್ಲೇ ಈಗ ಹಸ್ತಾಂತರಿಸಬೇಕೆಂದು ಬಾಂಗ್ಲಾ ಮನವಿ ಮಾಡುತ್ತಿದೆ.