ಬೆಳಗಾವಿ: ಅಶ್ಲೀಲ ಪದ ಬಳಕೆ ಮಾಡಿಲ್ಲ ಎನ್ನುವಾದದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ.ಟಿ. ರವಿಗೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಣೆ ಮಾಡಲು ನಾನು ಕುಟುಂಬ ಸಮೇತ ಬರುತ್ತೇನೆ. ಅವರು ಕುಟುಂಬ ಸಮೇತರಾಗಿ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ನಾನೂ ದೇವರ ಮೇಲೆ ಭಕ್ತಿ ಇಟ್ಟುಕೊಂಡವಳು. ನಾನು ದೇಶದ ಎಲ್ಲಾ ದೇವಾನುದೇವತೆ ನಂಬಿ ಬದುಕುತ್ತಿದ್ದೇನೆ. ನೀವು ಈ ಕುರಿತು ನಂಬಿದವರಂತೆ ಮಾತನಾಡುತ್ತೀರಿ. ಹಾಗಾದರೆ, ಕುಟುಂಬ ಸಮೇತರಾಗಿ ನಾನು ಆ ಪದ ಬಳಕೆ ಮಾಡಿಲ್ಲ ಎಂದು ಪ್ರಮಾಣ ಮಾಡಿ ಹೋಗಿ ಎಂದು ಸವಾಲು ಹಾಕಿದ್ದಾರೆ.
ಇದು ನನ್ನ ಸವಾಲು ಅಲ್ಲ. ನಾನು ಅವರಿಂದ ಜವಾಬು ಬಯಸಲ್ಲ. ದುರ್ಬುದ್ಧಿ ಇದ್ದ ಮನುಷ್ಯನಿಂದ ನಾನು ಜವಾಬು ಬಯಸಲ್ಲ. ಆದರೆ ಜನರ ಕಣ್ಣಿಗೆ ಮಣ್ಣೆರಚಿ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದ್ದಾರೆ. ಅವರ ಕಾರ್ಯಕರ್ತರ ಹಾಗೂ ನಾಯಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ನಿಮ್ಮ ಊರಿಗೆ ಸಾಕಷ್ಟು ಹತ್ತಿರ ಇದೆ. ಇಡೀ ದೇಶದ ಜನ ಧರ್ಮಕ್ಕೆ ಇನ್ನೊಂದು ಹೆಸರು ಧರ್ಮಸ್ಥಳ ಅಂತಾರೆ. ಮಂಜುನಾಥ ದೇವರ ಮೇಲೆ ನೀವು ಪ್ರಮಾಣ ಮಾಡಿ. ನಿಮಗೆ ನೈತಿಕತೆ ಇದ್ದರೆ ಅಲ್ಲಿಗೆ ಬನ್ನಿ ಎದು ಸವಾಲು ಹಾಕಿದ್ದಾರೆ.