ಬೆಂಗಳೂರು : ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿಯೊಂದನ್ನು ಮಾಡಿದ್ದು, ಇದು ಜಾರಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಸರ್ಕಾರಿ ನೌಕರರು, ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಧರಿಸಲು ಸುತ್ತೋಲೆ ಹೊರಡಿಸುವಂತೆ ಕಾರ್ಮಿಕ ಸಚಿವರು ಮನವಿ ಮಾಡಿದ್ದಾರೆ.
ಸಚಿವ ಸಂತೋಷ್ ಲಾಡ್ ಸಾಮಾಜಿಕ ಜಾಲತಾಣದ ಮೂಲಕ ಈ ರೀತಿ ಮನವಿ ಮಾಡಿ, ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಖಾದಿ ಎಂಬುದು ಕೇವಲ ಬಟ್ಟೆಯಲ್ಲ, ಅದೊಂದು ಜೀವನ ಪದ್ಧತಿ, ಸ್ವಾವಲಂಬಿ ಬದುಕಿನ ರೂಪಕ, ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಕೂಡ ಒಂದು ವ್ರತ’. ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು/ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ ಕಡ್ಡಾಯವಾಗಿ ಒಂದು ದಿನ ಖಾದಿ ಬಟ್ಟೆಗಳನ್ನು ಧರಿಸಬೇಕೆನ್ನುವ ಆದೇಶವನ್ನು ಹೊರಡಿಸುವಂತೆ ಮಾನ್ಯ @CMofKarnataka ಶ್ರೀ @siddaramaiah ಅವರಿಗೆ ಮನವಿ ಮಾಡಿಕೊಂಡಿದ್ದೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ. ಆದರೆ, ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.


















