ಬೆಂಗಳೂರು: ಮಾಜಿ ಸಂಸದ ಡಿ ಕೆ ಸುರೇಶ್ (DK Suresh) ತಂಗಿ ಎಂದು ಹೇಳಿಕೊಂಡು ವಂಚಿಸಿದ್ದ ಐಶ್ವರ್ಯ ಗೌಡ (Aishwarya Gowda) ಹಾಗೂ ಪತಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
8.41 ಕೋಟಿ ರೂ. ಮೌಲ್ಯದ ಚಿನ್ನ (Gold) ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ (Varahi World Gold Shop) ಮಾಲೀಕರು ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಐಶ್ವರ್ಯಾ ಗೌಡ ಹಾಗೂ ಪತಿ ಹರೀಶ್ಗೆ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಸಿಕ್ಕಿದೆ. ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠದ ಆದೇಶ ಹೊರಡಿಸಿದ್ದು, ಐಶ್ವರ್ಯಾ ಹಾಗೂ ಪತಿ ಹರೀಶ್ ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಅಲ್ಲದೇ, ಐಶ್ವರ್ಯಗೌಡ ದಂಪತಿಗೆ ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.