ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಸಾವನ್ನಪ್ಪಿದ 8 ಜನ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ದುರಂತದಲ್ಲಿ 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ 8 ಜನರು ಸಾವನ್ನಪ್ಪಿದ್ದರು.
ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಮಂಜು ವಾಗ್ಮೋಡೆ, ಲಿಂಗರಾಜ ಬೀರನೂರ, ತೇಜಸ್ವರ್ ಸುತಾರೆ, ರಾಜು ಮೂಗೇರಿ, ಶಂಕರ್ ಊರ್ಬಿ, ಪ್ರಕಾಶ್ ಬಾರಕೇರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.