ಬಿಜೆಪಿ ರೆಬೆಲ್ಸ್ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ರೆಬೆಲ್ಸ್ ನಾಯಕರು ದೆಹಲಿಯಲ್ಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿದ್ದಾರೆ. ಇಂದು ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಎಲ್ಲವನ್ನೂ ಸರಿ ಮಾಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎನ್ನಲಾಗಿದೆ. ಇನ್ನೊಂದೆಡೆ ಬಿ.ವೈ.
ವಿಜಯೇಂದ್ರ ಟೀಮ್ ಕೂಡ ರಾಜ್ಯದಲ್ಲಿ ಆಕ್ಟಿವ್ ಆಗಿದೆ. ಸದ್ಯದ ಸ್ಥಿತಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಯತ್ನಾಳ್ ಟೀಮ್ ಮತ್ತು ಬಿ.ವೈ. ವಿಜಯೇಂದ್ರ ಟೀಮ್ ಮಧ್ಯೆ ಪೈಪೋಟಿ ಕಂಡು ಬರುತ್ತಿದ್ದು, ಯಾರು ಪಟ್ಟ ಉಳಿಸಿಕೊಳ್ಳುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.