ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲು ಮುಂದಾಗಿದ್ದಾರೆ.
ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಭಾಗವಹಿಸಲಿದ್ದಾರೆ. ಫೆ. 9 ರ ಬೆಳಗ್ಗೆ ಡಿಕೆಶಿ ಪ್ರಯಾಗ್ರಾಜ್ ತಲುಪಲಿದ್ದಾರೆ. ಫೆ.10 ರಂದು ಮಧ್ಯಾಹ್ನ 1ರ ನಂತರ ಪ್ರಯಾಗ್ ರಾಜ್ ನಿಂದ ಮರಳಲಿದ್ದಾರೆ.
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ಕೋಟ್ಯಾಂತರ ಜನರು ಭೇಟಿ ನೀಡಿದ್ದಾರೆ.
ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗವಹಿಸಲು ಮುಂದಾಗಿದ್ದಾರೆ. ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹೀಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದಾರೆ.