ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿತ್ತು. ಈಗ ತನಿಖೆ ನಡೆಸಿದ ಅಧಿಕಾರಿ ವರದಿ ಸಲ್ಲಿಸಿದ್ದಾರೆ.
ತನಿಖೆ ನಡೆಸಿದ ತನಿಖಾಧಿಕಾರಿ ಎಸ್ಪಿ ಉದೇಶ್, ತನ್ನ ಹಿರಿಯ ಅಧಿಕಾರಿಗಳಾದ ಐಜಿಪಿ ಸುಬ್ರಹ್ಮಣ್ಣೇಶ್ವರ ರಾವ್ ಮತ್ತು ಎಡಿಜಿಪಿ ಮನೀಶ್ ಕರ್ಬೀಕರ್ ಗೆ ವರದಿಯ ಪ್ರತ್ಯೇಕ ಪ್ರತಿ ಸಲ್ಲಿಕೆ ಮಾಡಿದ್ದಾರೆ.
ವರದಿ ಪರಿಶೀಲಿಸಿ, ಇದುವರೆಗೆ ನಡೆದಿರುವ ತನಿಖೆಯ ಸರಿ-ತಪ್ಪುಗಳ ಪರಿಶೀಲನೆ ಮಾಡಲಿರುವ ಹಿರಿಯ ಅಧಿಕಾರಿಗಳು, ಮತ್ತೆ ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಕೋರ್ಟ್ ಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಸದ್ಯದ ಮಾಹಿತಿಯಂತೆ ಇದೇ ವಾರದ ಅಂತ್ಯದೊಳಗೆ ಮುಡಾ ಹಗರಣದ ಅಂತಿಮ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಸಲ್ಲಿಕೆ ಮಾಡಲಿದ್ದಾರೆ.