ಹಾವೇರಿ: ಸತ್ತಿದ್ದ ವ್ಯಕ್ತಿಯ ಶವವನ್ನು ಊರಿಗೆ ತರುತ್ತಿದ್ದ ವೇಳೆ ಆತ ಬದುಕಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆಸ್ಪತ್ರೆಯಿಂದ ಊರಿಗೆ ಕರೆತರುವಾಗ ಬದುಕಿದ್ದ ವ್ಯಕ್ತಿ, ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರ (Bankapura) ಗ್ರಾಮದಲ್ಲಿ ನಡೆದಿದೆ.
ಬಿಷ್ಟಪ್ಪ ಅಶೋಕ್ ಗುಡಿಮನಿ (45) ಸಾವನ್ನಪ್ಪಿರುವ ವ್ಯಕ್ತಿ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಸಾವನ್ನಪ್ಪಿದ್ದಾರೆ. ಊರಿಗೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದರು. ಹೀಗಾಗಿ ಕುಟುಂಬಸ್ಥರು ಮರಳಿ ಊರಿಗೆ ಹೋಗುತ್ತಿದ್ದರು.
ಆದರೆ, ಮರಳಿ ಊರಿಗೆ ಬರುತ್ತಿದ್ದ ವೇಳೆ, ಅವರ ಇಷ್ಟವಾದ ಡಾಬಾದ ಬಳಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ ಎಂದು ಗೋಳಾಡಿ ಪತ್ನಿ ಕಣ್ಣೀರಿಟ್ಟಾಗ ಸಾವನ್ನಪ್ಪಿರುವ ವ್ಯಕ್ತಿ ಉಸಿರು ಬಿಟ್ಟಿದ್ದರು.
ಕೂಡಲೇ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಿರಂತರವಾಗಿ ಒಂದು ವಾರ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.