ಚಿಕ್ಕಬಳ್ಳಾಪುರ: ಉಸಿರು ಇರುವವರೆಗೂ ನನ್ನ ಜನರ ಸೇವೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D Devegowda) ಹೇಳಿದ್ದಾರೆ.
ಚಿಕ್ಕಬಳ್ಳಾಪುರ (Chikkaballapur) ನಗರದ ಆದಿಚುಂಚನಗಿರಿ ಶಾಖಾ ಮಠದ (Adhichunchanagiri Math) ಮುಂಭಾಗದ ಸೂಲಾಲಪ್ಪನದಿನ್ನೆಯ ವೀರಾಂಜನೇಯಸ್ವಾಮಿ ದೇವಾಲಯದ ಬಳಿ ನಡೆದ ಕುಂಭಾಭಿಷೇಕ, ಬಾಲಗಂಗಾಧರನಾಥಶ್ರೀಗಳ 80ನೇ ಜಯಂತೋತ್ಸವ, ನಿರ್ಮಲಾನಂದನಾಥ ಶ್ರೀಗಳ 12ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನೊಬ್ಬ ರೈತನ ಮಗ. ಕೊನೆ ಉಸಿರು ಹೋಗುವವರೆಗೂ, ನನ್ನ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ. ನಾನು ಕುಳಿತುಕೊಳ್ಳುವ ವ್ಯಕ್ತಿಯಲ್ಲ. ಯಾರೊಬ್ಬರ ಬಗ್ಗೆಯೂ ನಾನು ಇಲ್ಲಿಯವರೆಗೆ ಕೀಳಾಗಿ ಮಾತನಾಡಿಲ್ಲ. ರಾಜ್ಯಕ್ಕೆ ಏನಾದರೂ ಒಳ್ಳೆಯದು ಮಾಡಬೇಕೆಂಬುವುದು ನನ್ನ ಹಠ ಹಾಗೂ ಛಲ ಎಂದಿದ್ದಾರೆ.
ನನ್ನ ಜನರಿಗಾಗಿ ಪಾರ್ಲಿಮೆಂಟ್ನಲ್ಲಿ ಹೋರಾಟ ಮಾಡುವ ಶಕ್ತಿ ಕೊಡು ಎಂದು ಕುಲದೇವ ಈಶ್ವರನಲ್ಲಿ ನಾನು ಯಾವಾಗಲೂ ಪ್ರಾರ್ಥಿಸುತ್ತಿದ್ದೇನೆ ಎಂದಿದ್ದಾರೆ.