ಮುಂಬಯಿ: ನಿರ್ದೇಶಕ ಎಸ್.ಎಸ್. ರಾಜಮೌಳಿ (S S Rajamouli) ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ನಿರ್ದೇಶಕ ರಾಜಮೌಳಿ ಮೇಲೆ ಗಂಭೀರ ಆರೋಪ ಮಾಡಿ ನಿರ್ಮಾಪಕ ಶ್ರೀನಿವಾಸ್ ರಾವ್ (Srinivas Rao) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ನಿರ್ಮಾಪಕರು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಯಮದೊಂಗ (Yamadonga) ಸಿನಿಮಾನಿರ್ಮಾಣ ಮಾಡಿದ್ದರು.
ಎಸ್.ಎಸ್ ರಾಜಮೌಳಿಯ ಆತ್ಮಿಯ ಸ್ನೇಹಿತರಾಗಿದ್ದ ಶ್ರೀನಿವಾಸ್ ರಾವ್ ಈಗ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಮತ್ತು ಸಾಯುವ ಮುನ್ನ ವಿಡಿಯೋವೊಂದನ್ನು ಮಾಡಿ, ತನ್ನ ಸಾವಿಗೆ ರಾಜಮೌಳಿ ಮತ್ತು ಅವರ ಪತ್ನಿ ರಮಾ ಕಾರಣ ಎಂದು ಹೇಳಿದ್ದಾರೆ.
ರಾಜಮೌಳಿ ಮತ್ತು ನಾನು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದೇವು. ಆದರೆ, ಆ ಹುಡುಗಿಯನ್ನು ತ್ಯಾಗ ಮಾಡುವಂತೆ ನನಗೆ ರಾಜಮೌಳಿ ಹೇಳಿದ. ಹೀಗಾಗಿ ನಾನು ಆ ಹುಡುಗಿಯನ್ನು ರಾಜಮೌಳಿಗೆ ಬಿಟ್ಟು ಕೊಟ್ಟೆ. ಅಲ್ಲಿಂದ ನಾನು ಮದುವೆ ಆಗಿಲ್ಲ. ರಾಜಮೌಳಿಗೂ ನನಗೂ 34 ವರ್ಷದ ಸ್ನೇಹ. ಇತ್ತೀಚೆಗೆ ನಮ್ಮ ಮಧ್ಯೆ ಸಣ್ಣ ಮನಸ್ತಾಪವಾಯಿತು.
ನಮ್ಮ ಲವ್ ಸ್ಟೋರಿಯನ್ನು ಸಿನಿಮಾ ಮಾಡುವುದಾಗಿ ಹೇಳಿದೆ. ಅಲ್ಲಿಂದ ರಾಜಮೌಳಿ ನಿರಂತರವಾಗಿ ನನಗೆ ಟಾರ್ಚರ್ ನೀಡಲು ಆರಂಭಿಸಿದ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಆದರೆ, ಶ್ರೀನಿವಾಸ್ ರಾವ್ ಅವರ ಮೃತದೇಹ ಮಾತ್ರ ಇದುವರೆಗೂ ಸಿಕ್ಕಿಲ್ಲ ಎನ್ನಲಾಗಿದೆ.