ಬೆಂಗಳೂರು: ಇತ್ತೀಚೆಗಷ್ಟೇ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದಿತ್ತು. ಜಿಲ್ಲೆಯ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ನಡೆದಿತ್ತು. ಈ ಪ್ರಕರಣದಿಂದಾಗಿ ಹಂಪಿ ಪ್ರವಾಸಿತಾಣದ ಮೇಲೆ ದುಷ್ಟಪರಿಣಾಮ ಬೀರಿದೆ. ಈ ಘಟನೆಯಿಂದ ಎಚ್ಚೆತ್ತುಕೊಂಡಿರುವ ಗೃಹ ಇಲಾಖೆ, ಭದ್ರತೆಯ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿದೆ.
ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇಗಳಲ್ಲಿ(resorts and homestays) ಭದ್ರತೆ ಮತ್ತು ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ. ಹೋಮ್ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಸಿಕ್ಕ ನಂತರ ಕರೆದುಕೊಂಡು ಹೋಗಬೇಕು ಎಂದು ಸೂಚಿಸಲಾಗಿದೆ.
ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಪ್ರವಾಸಿಗರನ್ನು ಕರೆದೊಯ್ದು ದುರ್ಘಟನೆ ಸಂಭವಿಸಿದರೆ ರೆಸಾರ್ಟ್, ಹೋಂಸ್ಟೇಗಳ ಮಾಲೀಕರೇ ಜವಾಬ್ದಾರರು ಎಂದು ಕೂಡ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.