ತುಮಕೂರು: ಮಹಿಳೆಯೊಬ್ಬರು ಎಲೆ, ಅಡಿಕೆ ಎಂಜಲು ತಿಂದು ಉಗುಳಿದ್ದನ್ನು ಪ್ರಶ್ನಿಸಿದ್ದಕ್ಕೆ ಬಸ್ ನಿರ್ವಾಹಕರ (KSRTC Conductor) ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತುಮಕೂರಿನಲ್ಲಿ (Tumkur) ಈ ಘಟನೆ ನಡೆದಿದೆ. ಪಾವಗಡದಿಂದ ತುಮಕೂರು ಕಡೆಗೆ ಹೊರಟ್ಟಿದ್ದ ಬಸ್ ನಲ್ಲಿ ಪಾವಗಡ ಪಟ್ಟಣದ ಇಬ್ಬರು ಮಹಿಳೆಯರು ಸೇರಿ ಒಟ್ಟು 6 ಜನ ಬಸ್ ನಲ್ಲಿ ಕುಳಿತಿದ್ದರು. 6 ಜನರೂ ಬೆಂಗಳೂರಿಗೆ ಪ್ರಯಾಣ ಮಾಡಬೇಕಾಗಿತ್ತು. ಆದರೆ ಕಂಡಕ್ಟರ್ ಬಸ್ ಬೆಂಗಳೂರಿಗೆ ಹೋಗಲ್ಲ ತುಮಕೂರಿಗೆ ಹೋಗುತ್ತದೆ ಎದಿದ್ದಾರೆ. ಈ ವೇಳೆ ಬಸ್ ನಿಂದ ಇಳಿಯುವಾಗ ಮಹಿಳೆಯೊಬ್ಬರು ಎಲೆ-ಅಡಿಕೆ ಎಂಜಲು ಉಗಿದಿದ್ದಾಳೆ ಎನ್ನಲಾಗಿದೆ.
ಇದನ್ನ ನೋಡಿ ಕಂಡಕ್ಟರ್ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಕ್ಲೀನ್ ಮಾಡುವಂತೆ ಮಹಿಳೆಗೆ ಹೇಳಿದ್ದಾರೆ. ಆಗ ಮಾತಿಗೆ ಮಾತು ಬೆಳೆದು, ಮಹಿಳೆ ಜೊತೆಗಿದ್ದವರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಕಂಡಕ್ಟರ್ ನನ್ನ ಬಸ್ ನಿಂದ ಹೊರಗೆ ಕರೆತಂದು ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಾವಗಡ ಬಸ್ ನಿರ್ವಾಹಕ ಅನಿಲ್ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.