ಬೆಂಗಳೂರು: ರಾಜ್ಯ ಸರ್ಕಾರ ನೀರಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ನಗರದಲ್ಲಿ ಪ್ರತಿ 1 ಲೀಟರ್ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ (Congress) ಸದಸ್ಯ ರಾಮೋಜಿಗೌಡ ಪ್ರಶ್ನೆಗೆ ಅವರು ಉತ್ತರಿಸಿದರು. ಬೆಂಗಳೂರಿನಲ್ಲಿ (Bengaluru) ನೀರಿನ ಸಮಸ್ಯೆ ಪರಿಹಾರಕ್ಕೆ ಅನೇಕ ಕ್ರಮ ಕೈಗೊಳ್ಳುತ್ತಿದ್ದೇವೆ. ಮಾರ್ಚ್ 22ರಂದು ವಿಶ್ವ ಜಲ ದಿನ ಇದೆ. ಹೀಗಾಗಿ ಅಂದಿನಿಂದ ಒಂದು ತಿಂಗಳ ಕಾಲ ʻನೀರು ಉಳಿಸಿʼ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಅಪಾರ್ಟ್ಮೆಂಟ್ಗಳಲ್ಲಿ ಕೆಲವರು ಯಾವುದೇ ಅನುಮತಿ ಇಲ್ಲದೇ ಬೋರ್ವೆಲ್ ಕೊರೆದಿದ್ದಾರೆ. ಅವರಿಗೆ ನೊಟೀಸ್ ಕೊಡುವ ಕೆಲಸ ಮಾಡಿದ್ದೇವೆ. 2014 ರಿಂದ ಇಲ್ಲಿವರೆಗೂ ನೀರಿನ ದರ ಏರಿಕೆ ಮಾಡಿಲ್ಲ. ಹೀಗಾಗಿ 1 ಪೈಸೆ ಆದರು ಜಾಸ್ತಿ ಮಾಡಬೇಕು ಎಂಬುವುದಾಗಿ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.