ಆನೇಕಲ್: ಕುಡಿದ ಮತ್ತಿನಲ್ಲಿ 6 ಜನ ಪರಸ್ಪರ ಹೊಡೆದಾಡಿಕೊಂಡು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ಪರಸ್ಪರ ಹೊಡೆದಾಡಿಕೊಂಡವರು ಬಿಹಾರ ಮೂಲದ ಕಾರ್ಮಿಕರು ಎನ್ನಲಾಗಿದೆ. ಅನ್ಸು(19), ರಾಧೆ ಶ್ಯಾಮ್(20) ಮತ್ತು ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮತ್ತಿಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ರಜೆ ನೀಡಲಾಗಿದೆ. ಹೀಗಾಗಿ ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.