ಶಿವಮೊಗ್ಗ: ಶಿಕಾರಿಪುರದಲ್ಲಿಂದು ಮಾಜಿ ಸಿಎಂ ಯಡಿಯೂರಪ್ಪ ಹನುಮ ಜಯಂತಿ ಆಚರಿಸಿದ್ದಾರೆ.
ನಗರದ ಪ್ರಸಿದ್ಧ ಹುಚ್ಚರಾಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಯಡಿಯೂರಪ್ಪ ವಿಶೇಷ ಪೂಜೆ ನೆರವೇರಿಸಿದರು. ಹನುಮ ಜಯಂತಿ ಪವಿತ್ರ ಸಂದರ್ಭದಲ್ಲಿ ವಿಶೇಷ ಪೂಜೆ ನೆರವೇರಿಸಿದ ಯಡಿಯೂರಪ್ಪ, ನಾಡಿನ ಒಳಿತಿಗೆ ಪ್ರಾರ್ಥಿಸಿದರು.

ಇದೇ ವೇಳೆ ಜರುಗಿದ ದೇವರ ರಥೋತ್ಸವದಲ್ಲೂ ಯಡಿಯೂರಪ್ಪ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಮಹೋತ್ಸವಕ್ಕೆ ಸಾಕ್ಷಿಯಾಗಿದ್ದರು.