ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ಎ1 ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿಲ್ಲ. ಹೀಗಾಗಿ ಅವರು ರಾಜಾರೋಷವಾಗಿ ಓಡಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಎ 1 ಅರೋಪಿ ತನ್ನಿರಾ ಮೈನಾ ಕಳೆದ ಎರಡು ದಿನಗಳ ಹಿಂದೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ಅರವತ್ತೋಕ್ಲು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.
ಗ್ರಾಮದ ದೇವಾಲಯದ ವಾರ್ಷಿಕೋತ್ಸವ ಹಬ್ಬದಲ್ಲಿ ತನ್ನಿರಾ ಮೈನಾ ಕಾಣಿಸಿಕೊಂಡಿದ್ದಾರೆ. ಯಾವುದೇ ಪೊಲೀಸರ ಭಯ ಇಲ್ಲದೇ ದೇವಾಲಯದ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡಿದ್ದಾನೆ. ಕಾಂಗ್ರೆಸ್ ಪಕ್ಷದ ನಾಯಕರಿಂದಲೇ ರಕ್ಷಣೆ ಸಿಗುತ್ತಿದೆಯೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈಗ ತನ್ನೀರಾ ಮೈನಾ ನೃತ್ಯ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳು ವೈರಲ್ ಆಗಿವೆ.