ಕುಂದಾಪುರ: ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲೀಕತ್ವದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಬುಧವಾರ ಕುಂದಾಪುರ ಯುವ ಜನಾ ಕಾಂಪ್ಲೆಕ್ಸ್ ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು.

ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿನೂತನವಾದ ಶೈಲಿಯಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರ, ಬೈಂದೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಬೆಳೆಯುತ್ತಿರುವ ನಗರೀಕರಣಕ್ಕೆ ಭತ್ರದೆ ವ್ಯವಸ್ಥೆ ಕಲ್ಪಿಸುವುದು ಸರಕಾರಕ್ಕೂ ಹೊರೆಯಾಗಲಿದ್ದು, ಖಾಸಗಿ ಸಂಸ್ಥೆಗಳ ಅವಶ್ಯಕತೆ ಬಹಳಷ್ಟು ಇದೆ. ಆ ನಿಟ್ಟಿನಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಸಾರ್ವಜನಿಕ ಸೇವಾ ವಲಯದಲ್ಲಿ ತನ್ನ ವಿಶಿಷ್ಟವಾದ ಕಾರ್ಯಚರಣೆ ಮೂಲಕ ದಿನದ 24 ಗಂಟೆ ಕೆಲಸವನ್ನು ಮಾಡಲು ಮುಂದಡಿ ಇಟ್ಟಿದೆ.

ಬ್ಯಾಂಕ್, ಸೊಸೈಟಿ, ಶಿಕ್ಷಣ ಸಂಸ್ಥೆ, ಆಭರಣ ಮಳಿಗೆ, ಕಮರ್ಷಿಯಲ್ ಬಿಲ್ಡಿಂಡಿಗ್, ಫ್ಯಾಕ್ಟರಿ, ಕೃಷಿ ತೋಟ, ಮನೆ ಮಠಗಳಿಗೆ ಸೇವೆಯನ್ನು ನೀಡಲಿದ್ದು, ಭತ್ರದೆಯ ದೃಷ್ಟಿಯಿಂದ ಸಾರ್ವಜನಿಕರು ಸಂಸ್ಥೆಯ ಸೇವೆಯನ್ನು ಬಳಸಿಕೊಳ್ಳಬಹುದು. ಕಳೆದ 6 ತಿಂಗಳುಗಳಿಂದ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಕೆಲಸ ನಿರ್ವಹಿಸುತ್ತಿದೆ.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕಚೇರಿ ಉದ್ಘಾಟಿಸಿ ಮಾತನಾಡಿ, ಲೈವ್ ಮಾನಿಟರಿಂಗ್ ಸಿಸ್ಟಮ್ ಕುಂದಾಪುರದಲ್ಲಿ ಹೊಸ ವಿನ್ಯಾಸದೊಂದಿಗೆ ಆರಂಭಗೊಂಡಿರುವುದರಿಂದ ಉತ್ತಮ ಸಂಸ್ಥೆ ನಮ್ಮ ಊರಿಗೆ ದೊರಕಿದಂತಾಗಿದೆ. ಇದು ಭದ್ರತೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಅಭಿಪ್ರಾಯ ಪಟ್ಟರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಪ್ರಕರಣಗಳು ಸಂಭವಿಸಿದಂತಹ ಸಂದರ್ಭದಲ್ಲಿ ಸಿಸಿಟಿವಿ ಮಾನಿಟರಿಂಗ್ ಸಿಸ್ಟಮ್ ಬಹಳಷ್ಟು ಕೊಡುಗೆ ನೀಡಿರುವುದನ್ನು ನಾವು ಗಮನಿಸಿದ್ದೇವೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕುಂದಾಪುರ ಪ್ರದೇಶದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ತನ್ನದೆ ರೀತಿಯಲ್ಲಿ ಕೆಲಸವನ್ನು ಮಾಡಲಿದ್ದು, ಸಾರ್ವಜನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಲು ಮುಂದಾಗಿರುವುದು ಹೊಸ ಬೆಳವಣಿಗೆ ಆಗಿದೆ ಎಂದಿದ್ದಾರೆ.

ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಯುವಕರು ಹೊಸ ಕಲ್ಪನೆ ಮತ್ತು ವಿಶೇಷವಾದ ಆಲೋಚನೆಯೊಂದಿಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಸಾರ್ವಜನಿಕ ಕ್ಷೇತ್ರಕ್ಕೆ ಭದ್ರತಾ ಸಂಸ್ಥೆಗಳ ಅವಶ್ಯಕತೆ ಬಹಳಷ್ಟಿದ್ದು ಸಮಾಜಕ್ಕೆ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಸಂಸ್ಥೆ ತನ್ನದೆ ರೀತಿಯಲ್ಲಿ ಕೊಡುಗೆ ನೀಡಲಿದೆ. ಸಂಸ್ಥೆ ಸೌಲಭ್ಯವನ್ನು ಎಲ್ಲರೂ ಬಳಕೆ ಮಾಡಿಕೊಳ್ಳುವಂತೆ ಆಗಲಿ ಎಂದು ಶುಭ ಹಾರೈಸಿದರು.

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಪಾಲುದಾರರಾದ ದಿಗಂತ ಶೆಟ್ಟಿ ಮತ್ತು ದೀಕ್ಷಿತ್ ಶೆಟ್ಟಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಸಿಸಿಟಿವಿ ಅಳವಡಿಕೆ ಸೇರಿದಂತೆ ಮಾನಿಟರಿಂಗ್ ಸಿಸ್ಟಮ್ ನಲ್ಲಿ ಅನುಭವನ್ನು ಹೊಂದಲಾಗಿದ್ದು, 5ಜಿ ನೆಟ್ವರ್ಕ್ ಮತ್ತು ಎಐ ತಂತ್ರಜ್ಞಾನ ಬಳಕೆ ಮಾಡಿಕೊಂಡು ಆಧುನಿಕ ವ್ಯವಸ್ಥೆಯೊಂದಿಗೆ ಸಂಸ್ಥೆ ಆರಂಭಿಸಲಾಗಿದೆ. ಸಾರ್ವಜನಿಕರು ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ಕಂಬದಕೋಣೆ ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಚಲನಚಿತ್ರ ನಟ ದೀಪಕ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿವ್ಯಧರ ಶೆಟ್ಟಿ, ಪ್ರೇಮಾನಂದ ಕಟ್ಕಕೆರೆ, ಡಾ. ಅತುಲ್ ಕುಮಾರ್ ಶೆಟ್ಟಿ, ಹರ್ಷವರ್ಧನ್, ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಪಾಲುದಾರ ರಕ್ಷಿತ್ ಶೆಟ್ಟಿ ಸೇರಿದಂತೆ ಹಲವರು ಇದ್ದರು.