ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ನಡೆದಿದೆ.
ಗದಗ ನಗರದ ಎಸ್.ಎಂ. ಕೃಷ್ಣ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದೊಣ್ಣೆಗಳಿಂದ ಪರಸ್ಪರ ಯುವಕರು ಬಡಿದಾಡಿಕೊಂಡಿದ್ದಾರೆ. ಎಸ್.ಎಂ. ಕೃಷ್ಣ ಕಾಲೋನಿಯ ಕೆಳಗಿನ ಓಣಿಯ ಯುವಕರ ಮೇಲೆ ಮೇಲಿನ ಓಣಿಯ ಯುವಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಹಲವು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓರ್ವ ಯುವಕನ ತಲೆಗೆ ಗಂಭೀರವಾದ ಗಾಯಗಳಾಗಿವೆ. ಯುವಕರ ಗಲಾಟೆ ಕಂಡು ಮಹಿಳೆಯರು, ಪೋಷಕರು ಭಯದಲ್ಲಿ ಚೀರಾಡಿ, ಭಯಭೀತರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















