ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗ್ರಾಮದ 6 ವರ್ಷದ ಬಾಲಕ ಬಾಲಾಜಿ ಸಾವನ್ನಪ್ಪಿರುವ ದುರ್ದೈವ ಮಗು ಎನ್ನಲಾಗಿದೆ. ಬಾಲಕ ಪ್ರೇಮನಾಥ್ ಎಂಬುವವರ ಪುತ್ರ ಎನ್ನಲಾಗಿದೆ.
ಸ್ನೇಹಿತರ ಜೊತೆ ಈಜಲು ತೆರಳಿದ್ದ ವೇಳೆ ಬಾಲಕ ನೀರುಪಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹ ಹುಡುಕಾಟಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ತಳಕು ಪಿಎಸ್ ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.