ಕೊಡಗು: ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಎರಡನೇ ದಿನವೂ ಕಾಡಾನೆ ದಾಳಿ ಮುಂದುವರೆದಿದೆ. ಗುರುವಾರ ಬೆಳಗ್ಗೆ ಈ ಕಾಡನೆ ವ್ಯಕ್ತಿಯೊಬ್ಬರನ್ನು ಬಲಿ ಪಡೆದಿತ್ತು. ಇದು ಕೂಡ ಕಾಡಾನೆ ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸತತ ಎರಡು ದಿನಗಳಲ್ಲಿ ಇಬ್ಬರನ್ನೂ ಕಾಡಾನೆ ಬಲಿ ಪಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಯ ಮಾದ್ದಾರೆ ಅರಣ್ಯ ವ್ಯಾಪ್ತಿಯ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ.
ಕಾಫಿ ಬೆಳೆಗಾರ ಸುಳ್ಯಕೋಡಿ ಚಿನ್ನಪ್ಪ( 76) ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶುಕ್ರವಾರ ಎಮ್ಮೆಗುಂಡಿಯಲ್ಲಿ ಕಾಡಾನೆ ಬಲಿ ಪಡೆದಿತ್ತು ಎನ್ನಲಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡುತ್ತಿದೆ.