ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಈಗಾಗಲೇ 26 ಜನರು ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದ ವಿರುದ್ದ ಸಾಕಷ್ಟು ಆಕ್ರೋಷ ವ್ಯಕ್ತವಾಗುತ್ತಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ದೇಶದ ಜನತೆ ಪಟ್ಟು ಹಿಡಿದಿದ್ದಾರೆ.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ, ಪಾಕಿಸ್ತಾನದ ವಿರುದ್ದ ಸಿಂಧೂ ನದಿ ಒಪ್ಪಂದ ರದ್ದು ಸೇರಿದಂತೆ ಸಾಕಷ್ಟು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಆ ಕಡೆ ಪಾಕಿಸ್ತಾನ ಭಾರತದಿಂದ ಯಾವಾಗ ಬೇಕಾದರೂ ಯುದ್ದ ಸಾರಬಹುದು ಎಂಬ ಭಯದಿಂದ ಹೆಚ್ಚಿನ ಸೇನೆಯನ್ನು ನಿಯೋಜನೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ನಟ ಧೃವಸರ್ಜಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ದಾಳಿಗೆ ನಮ್ಮ ಸೈನಿಕರು ತಕ್ಕ ಉತ್ತರ ಕೊಟ್ಟೆ ಕೊಡುತ್ತಾರೆ. ಈಗಾಗಲೇ ನಮ್ಮ ಮೋದಿಯವರು ಸಿಂಧೂ ನದಿ ಒಪ್ಪಂದವನ್ನು ರದ್ದು ಮಾಡಿದ್ದಾರೆ. ಮುಂದೆ ಆ ಉಗ್ರರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಯುದ್ಧ ನಾವು ಶುರು ಮಾಡಿಲ್ಲ. ಅವರೇ ಶುರು ಮಾಡಿದ್ದಾರೆ. ಇದಕ್ಕೆ ಉತ್ತರ ನಮ್ಮ ಇಂಡಿಯನ್ ಆರ್ಮಿ ಕೊಡುತ್ತೆ ಎಂದು ಧೃವಸರ್ಜಾ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಧೃವ ಸರ್ಜಾ ಅವರು ಮಾರ್ಟಿನ್ ಸಿನಿಮಾದ ನಂತರ, ಕೆಡಿ ಸಿನಿಮಾ ಕಡೆ ಹೆಚ್ಚು ಗಮನ ಹರಿಸ್ತಾ ಇದ್ದಾರೆ.