ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಪಾಲರು ಗ್ರೇಟರ್ ಬೆಂಗಳೂರಿನ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಹೀಗಾಗಿ ಬಿಬಿಎಂಪಿಗೆ ಒಂದು ವರ್ಷ ಚುನಾವಣೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ. ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಪಾಲಿಕೆ ಚುನಾವಣೆ ಬಗ್ಗೆ ಅರ್ಜಿ ವಿಚಾರಣೆ ನಡೆಯುತ್ತಿದೆ.
ಇನ್ನೊಂದೆಡೆ ರಾಜ್ಯ ಸರ್ಕಾರ ಮತ್ತೊಂದು ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದೆ. ಬೆಂಗಳೂರು ನಗರವನ್ನು ಅಭಿವೃದ್ಧಿ ದೃಷ್ಟಿಯಿಂದ ವಿಭಜನೆ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ವಾರ್ಡ್ ಗಳ ಮರು ವಿಂಗಡೆ ಮಾಡಬೇಕು. ಬೆಂಗಳೂರು ಗ್ರಾಮಾಂತರ ಪ್ರದೇಶದ ಕೆಲ ಪ್ರದೇಶಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತರಬೇಕು. ಹೀಗಾಗಿಯೇ ವಾರ್ಡ್ ಗಳ ಗಡಿ ಗುರುತು ಮಾಡಬೇಕು. ಬಿಬಿಎಂಪಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪಾಲಿಕೆಯ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.