ಬೆಂಗಳೂರು: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳ ಆಟಗಾರರು ಐಪಿಎಲ್ 2025ರ ಏಪ್ರಿಲ್ 26 ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆದ ಪಂದ್ಯದ ವೇಳೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಗೌರವಾರ್ಥ ಕಪ್ಪು ಪಟ್ಟಿಗಳನ್ನು ಧರಿಸಿ ಆಡಿದರು. ಈ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸೂಚಿಸಲು, ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳ (ಸಿಎಬಿ) ಪಂದ್ಯದ ಮೊದಲು ಒಂದು ನಿಮಿಷದ ಮೌನಾಚರಣೆ ಆಯೋಜಿಸಿತು. ಸಾಂಪ್ರದಾಯಿಕವಾಗಿ ಪಂದ್ಯದ ಆರಂಭದ ಮೊದಲು ಈಡನ್ ಗಾರ್ಡನ್ಸ್ನಲ್ಲಿ ಗಂಟೆ ಬಾರಿಸುವ ಕಾರ್ಯಕ್ರಮವನ್ನು ಈ ಬಾರಿ ರದ್ದುಗೊಳಿಸಲಾಯಿತು. ಕೆಕೆಆರ್ನ ನಾಯಕ ಅಜಿಂಕ್ಯ ರಹಾನೆ ಮತ್ತು ಪಿಬಿಕೆಎಸ್ನ ನಾಯಕ ಶ್ರೇಯಸ್ ಅಯ್ಯರ್ ಸೇರಿದಂತೆ ಎರಡೂ ತಂಡಗಳ ಆಟಗಾರರು ಕಪ್ಪು ಪಟ್ಟಿಗಳನ್ನು ಧರಿಸಿ ತಮ್ಮ ಸಂತಾಪ ವ್ಯಕ್ತಪಡಿಸಿದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ ಏಪ್ರಿಲ್ 23 ರಂದು ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಒಂದು ನಿಮಿಷದ ಮೌನಾಚರಣೆ, ಕಪ್ಪು ಪಟ್ಟಿಗಳನ್ನು ಧರಿಸಿದರು. ಜತೆಗೆ ಚೀರ್ ಲೀಡರ್ಗಳನ್ನು ಕೂಡ ಕುಣಿಸಲಿಲ್ಲ. ಕೆಕೆಆರ್ ಮತ್ತು ಪಿಬಿಕೆಎಸ್ ತಂಡಗಳು ಈ ಸಂಪ್ರದಾಯವನ್ನು ಮುಂದುವರಿಸಿದವು.
ಪಹಲ್ಗಾಮ್ ದಾಳಿಯನ್ನು ಲಷ್ಕರ್-ಎ-ತೊಯ್ಬಾದ (ಎಲ್ಇಟಿ) ಒಂದು ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಎಂಬ ಭಯೋತ್ಪಾದಕ ಸಂಘಟನೆಯ ಕೃತ್ಯವಾಗಿದೆ. ಈ ದಾಳಿಯನ್ನು 2008ರ ಮುಂಬೈ ದಾಳಿಗಳ ನಂತರ ಭಾರತದಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದು.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಮತ್ತು ಸುನಿಲ್ ಗವಾಸ್ಕರ್ ಸೇರಿದಂತೆ ಹಲವು ಕ್ರಿಕೆಟಿಗರು ಈ ದಾಳಿಯನ್ನು ಖಂಡಿಸಿದ್ದಾರೆ. ಸುನಿಲ್ ಗವಾಸ್ಕರ್ ಶಾಂತಿಗಾಗಿ ಒಂದು ಶಕ್ತಿಶಾಲಿ ಸಂದೇಶ ನೀಡಿದರು, ಇಂತಹ ಹಿಂಸಾಚಾರದಿಂದ ಯಾವ ಉದ್ದೇಶವನ್ನು ಸಾಧಿಸಲಾಗಿದೆ ಎಂದು ದಾಳಿಯ ಹಿಂದಿನ ಮಾಸ್ಟರ್ಮೈಂಡ್ಗಳಿಗೆ ಪ್ರಶ್ನಿಸಿದರು.
ಕ್ರಿಕೆಟ್ ಸಮುದಾಯದ ಈ ಗೌರವ ಸೂಚನೆಯು ರಾಷ್ಟ್ರವು ಈ ದುರಂತವನ್ನು ಎದುರಿಸುತ್ತಿರುವಾಗ ಒಗ್ಗಟ್ಟಿನ ಮತ್ತು ಸಂತಾಪದ ಸಂದೇಶವನ್ನು ರವಾನಿಸಿತು.