ಮಂಗಳೂರು: ಉಳ್ಳಾಲದ ಹೆಬ್ಬಾಗಿಲಿನಲ್ಲಿ 110 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹರಿದ ರಾಷ್ಟ್ರಧ್ವಜ ಹಾರಾಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಧ್ವಜ ಹರಿದು ಹೋಗಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಇದು ಗೊತ್ತಿದ್ದರೂ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಧ್ವಜ ಸಂಹಿತೆ ನಿಯಮವನ್ನು ಕಾಪಾಡಬೇಕಾದವರೇ ಮೌನ ವಹಿಸಿದರೆ ಹೇಗೆ..? 2022ರ ಆಗಸ್ಟ್ 15ರಂದು ಲೋಕಾರ್ಪಣೆಯಾಗಿದ್ದ ಧ್ವಜ ಸ್ತಂಭವನ್ನು ಇನ್ನೂ ಕೆಳಗೆ ಇಳಿಸಿಲ್ಲ. ಸ್ಪೀಕರ್ ಯುಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಈ ಅವಾಂತರ ಬೆಳಕಿಗೆ ಬಂದಿದೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.