ಬಾಗಲಕೋಟೆ: ಚಾಲಕ ಹಾಗೂ ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ರಬಕವಿ- ಬನಹಟ್ಟಿ ತಾಲ್ಲೂಕಿನ ಜಗದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಧಾನವಾಗಿ ಹೋಗು ಎಂದು ಬುದ್ಧಪ್ಪ ಎಂದು ಬುದ್ಧಿವಾದ ಹೇಳಿದಕ್ಕೆ ಸಾರಿಗೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನಲಾಗಿದೆ. ಚಲಿಸುತ್ತಿದ್ದ ಬಸ್ಗೆ ಬೈಕ್ ಸವಾರ ಅಡ್ಡ ಬಂದಿದ್ದ. ಆಗ, ಬಸ್ ಚಾಲಕ ನಿಧಾನವಾಗಿ ಹೋಗಪ್ಪ ಅಂತ ಬುದ್ದಿವಾದ ಹೇಳಿದ್ದಾರೆ. ಆಗ ಸವಾರ ವಾಗ್ವಾದ ನಡೆಸಿದ್ದಾನೆ.
ಆಗ ತನ್ನ ತಂದೆಗೆ ಕರೆ ಮಾಡಿದ್ದಾನೆ. ಜಗದಾಳ ಬಳಿ ಬೊಲೆರೊ ವಾಹನದಲ್ಲಿ ಜನರನ್ನು ಕರೆತಂದು ಚಾಲಕ ಮತ್ತು ನಿರ್ವಾಹಕರ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.