ಚಾಮರಾಜನಗರ: ತಾಲೂಕಿನ ಪುಣಜೂರು ಬಳಿ ತಡರಾತ್ರಿ ಸುರಿದ ಗಾಳಿ, ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ. ಗ್ರಾಮದ ಸಿದ್ದನಾಯ್ಕ ಎಂಬುವವರು ಸುಮಾರು ಒಂದು ಎಕರೆಯಷ್ಟು ಜಮೀನಿನಲ್ಲಿ ಬಾಳೆ ಬೆಳೆದಿದ್ದರು. ಆದರೆ, ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಬಾಳೆ ಸಂಪೂರ್ಣವಾಗಿ ನೆಲ ಕಚ್ಚಿದೆ. ಇದರಿಂದಾಗಿ ರೈತಗೆ ಲಕ್ಷಾಂತರ ರೂ. ನಷ್ಟವಾಗಿದೆ. ಹೀಗಾಗಿ ಸೂಕ್ತ ಪರಿಹಾರ ನೀಡಬೇಕೆಂದು ರೈತ ಆಗ್ರಹಿಸಿದ್ದಾರೆ.