ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ನಿನ್ನೆ ಸುರಿದ ಭಾರೀ ಗಾಳಿ, ಸಿಡಿಲು-ಗುಡುಗಿನ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ನಡೆದಿವೆ. ಮರಗಳು ಧರೆಗೆ ಉರುಳಿ ಬಿದ್ದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರದ ತಿರುಮಗೊಂಡನಹಳ್ಳಿಯ ಕೆಂಪಣ್ಣ ಎಂಬುವವರ ಮನೆ ಮುಂದೆ ಇದ್ದ ತೆಂಗಿನ ಮರ ಏಕಾಏಕಿ ಸಿಡಿಲು ಬಡಿದು ಸುಟ್ಟು ಹೋಗಿದ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.