ಚಿಕ್ಕಮಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ದಾಳಿ, ಸುಹಾಸ್ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಗೆ ಭಜರಂಗದಳ, VHP ಕರೆ ನೀಡಿವೆ.
ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಭಜರಂಗದಳ, VHP ಮುಂದಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲು ಸೂಚನೆ ನೀಡಲಾಗಿದೆ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಮನವಿ ಮಾಡಲಾಗಿದೆ.