ದಕ್ಷಿಣ ಕನ್ನಡದಲ್ಲಿ ಕೊರಗಜ್ಜನ ಪವಾಡದ ಬಗ್ಗೆ ಬಹಳ ನಂಬಿಕೆ ಇದೆ. ಇದೀಗ ಕಿರುತೆರೆ ನಟಿ ಕೊರಗಜ್ಜನ ಪವಾಡದ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ.
ಅನೇಕ ವರ್ಷಗಳಿಂದ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ತನ್ನ ಛಾಪನ್ನು ಮೂಡಿಸಿರುವ ಇಳಾ ವಿಟ್ಲ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕಲ್ಯಾಣಿ ಕಾದಂಬರಿ, ನಾಗಿಣಿ 1, ಸೊಸೆ ತಂದ ಸೌಭಾಗ್ಯ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದಾರೆ. ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಅವರು ಕೊರಗುಜ್ಜನ ದೇವಸ್ಥಾನಕ್ಕೆ ಹೋಗಿ ಅಲ್ಲಿ ಪೂಜೆಯನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕೊರಗಜ್ಜನ ಬಗ್ಗೆ ಅವರು ಮಾತನಾಡಿದ್ದಾರೆ. ವಸಂತ ರುಕ್ಮಿಣಿ ಶೂಟಿಂಗ್ ನಡೆಯುತ್ತಿದ್ದ ವೇಳೆ ತನ್ನ ಮೊಬೈಲ್ ಕಳ್ಳತನವಾಗಿತ್ತು. ಹೀಗಾಗಿ ಕೊರಗಜ್ಜನಿಗೆ ಹರಕೆ ಹೊತ್ತೆ. ಆನಂತರ ನನ್ನ ಮೊಬೈಲ್ ಸಿಕ್ಕಿತು ಎಂದು ಹೇಳಿದ್ದಾರೆ. ಆಗಿನಿಂದ ನಾನು ಕೊರಗಜ್ಜನ ನಂಬಲು ಆರಂಭಿಸಿದೆ ಎಂದಿದ್ದಾರೆ.