ತುಮಕೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಗೋರಘಟ್ಟ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೋಷಕ ಶೆಟ್ಟಿ(5) ಸಾವನ್ನಪ್ಪಿರುವ ಬಾಲಕ. ಚಂದ್ರಯ್ಯ ಎಂಬುವರ ಮಗ ಪೋಷಕ ಶೆಟ್ಟಿ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ತಂತಿ ತುಂಡಾಗಿ ಮನೆ ಮುಂದಿನ ತಂತಿ ಬೇಲಿ ಮೇಲೆ ಬಿದ್ದಿದೆ. ಇದು ಗೊತ್ತಿಲ್ಲದ ಪೋಷಕ ಶೆಟ್ಟಿ, ಆಟವಾಡುತ್ತ ಹೋಗಿ ಮುಟ್ಟಿದ್ದಾನೆ. ಕೂಡಲೇ ವಿದ್ಯುತ್ ಪ್ರಹವಿಸಿ ಸಾವನ್ನಪ್ಪಿದ್ದಾನೆ. ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಂಡಿನ ಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.