ರಾಮನಗರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದ್ದು, ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಪಾಂಡುಪುರ ಗ್ರಾಮದ ಹತ್ತಿರ ನಡೆದಿದೆ. ಬೆಂಗಳೂರಿನ (Bengaluru) ಹೆಬ್ಬಾಳ ಮೂಲದ ಮೋಹನ್ ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.