ನವದೆಹಲಿ: ಆಪರೇಷನ್ ಸಿಂಧೂರ ನಿಂತಿಲ್ಲ. ಸದ್ಯಕ್ಕೆ ನಿಲ್ಲಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇಂದು ದೇಶ ಉದ್ಧೇಶಿಸಿ ಮಾತನಾಡಿದ ಅವರು, ಮೊದಲಿಗೆ ದೇಶದ ಸೈನಿಕರಿಗೆ ಸೆಲ್ಯೂಟ್ ಮಾಡಿದ್ದಾರೆ. ನಮ್ಮ ಸಾಮರ್ಥ್ಯ ವಿಶ್ವಕ್ಕೆ ಗೊತ್ತಾಗಿದೆ. ಇದು ಕೇವಲ ಆಪರೇಷನ್ ಸಿಂಧೂರ ಹೆಸರಲ್ಲ. ಲಕ್ಷಾಂತರ ಜನರ ಭಾವನೆಗಳ ಪ್ರತಿಬಿಂಬ. ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ದಾಳಿ ಮಾಡಿದವು. ದೊಡ್ಡ ಹೆಜ್ಜೆಗಳನ್ನು ಇಡುತ್ತದೆ ಎಂದು ಭಯೋತ್ಪಾದಕರು ಕನಸು ಕಂಡಿರಲಿಲ್ಲ. ಭಾರತೀಯ ಕ್ಷಿಪಣಿಗಳು ಮತ್ತು ಡ್ರೋನ್ಗಳು ಪಾಕಿಸ್ತಾನದಲ್ಲಿರುವ ಆ ತಾಣಗಳ ಮೇಲೆ ದಾಳಿ ಮಾಡಿದಾಗ, ಅದು ಭಯೋತ್ಪಾದಕರ ಕಟ್ಟಡಗಳ ಮೇಲೆ ಮಾತ್ರವಲ್ಲ, ಧೈರ್ಯವನ್ನು ಪುಡಿಪುಡಿ ಮಾಡಿವೆ.
ಭಯೋತ್ಪಾದಕರನ್ನು ನಾಶಮಾಡಲು ನಾವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದೇವೆ. ಭಯೋತ್ಪಾಕರನ್ನು ಅವರ ಮಣ್ಣಲ್ಲಿ ಹೂತು ಹಾಕುತ್ತೇವೆ. ಆಪರೇಷನ್ ಸಿಂಧೂರ್ ಮೂಲಕ ವಿಶ್ವ ಪಾಕಿಸ್ತಾನದ ಸತ್ಯವನ್ನು ನೋಡಿದೆ ಎಂದಿದ್ದಾರೆ.